🌺 ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ – ಸಮಾಜದ ಬಹುಕಾಲದ ಬೇಡಿಕೆಗಳ ಮನವಿ ಸಲ್ಲಿಕೆ 🌺

ಮಂಗಳೂರು: ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.), ದಕ್ಷಿಣ ಕನ್ನಡ, ಕರ್ನಾಟಕ ಇದರ ವತಿಯಿಂದ ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಬಹುಕಾಲದ ಬೇಡಿಕೆಗಳು ಹಾಗೂ ಪ್ರಮುಖ ಸಮಸ್ಯೆಗಳ ಕುರಿತು ಮನವಿಯನ್ನು ಶ್ರೀ ಬಿ.ಕೆ. ಹರಿಪ್ರಸಾದ್ ಅವರಿಗೆ ಸಲ್ಲಿಸಿ, ಅವುಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸತ್ಯಜಿತ್ ಸುರತ್ಕಲ್ ಸೇರಿದಂತೆ ಜಿಲ್ಲಾ ಪ್ರಮುಖರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.

ಸಮಾಜದ ಹಿತ, ಸಮುದಾಯದ ಅಭಿವೃದ್ಧಿ ಹಾಗೂ ಯುವಜನರ ಭವಿಷ್ಯಕ್ಕಾಗಿ ಸಂಘಟಿತ ಪ್ರಯತ್ನಗಳು ಮುಂದುವರಿಯಲಿ ಎಂಬ ಆಶಯ ಈ ಸಂದರ್ಭದಲ್ಲಿ ವ್ಯಕ್ತವಾಯಿತು.

🙏 ಗುರುದೇವ ಶ್ರೀ ನಾರಾಯಣ ಗುರುಗಳ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ.

BYVNEWS
ಸತ್ಯ • ಧರ್ಮ • ನ್ಯಾಯ • ಸಮಾಜದ ಧ್ವನಿ

Leave a Reply

Your email address will not be published. Required fields are marked *